ಸಿದ್ದಾಪುರದಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿ : ನಾಲ್ವರಿಗೆ ಗಾಯ

ಸಿದ್ದಾಪುರ: ಉತ್ತರಕನ್ನಡದ ವಿವಿಧ ತಾಲೂಕುಗಳಿಂದ ಪ್ರತಿದಿನ ಒಂದಿಲ್ಲೊಂದು ಅಪಘಾತ ಪ್ರಕರಣಗಳು ವರದಿಯಾಗುತ್ತಿದ್ದು, ಇಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರಿಗೆ ಗಾಯಗಳಾದ ಘಟನೆ ವರದಿಯಾಗಿದೆ.

ಸಿದ್ದಾಪುರ ಕಡೆಯಿಂದ ಕುಮಟಾ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ತಾಲೂಕಿನ ಬೇಡ್ಕಣಿ ಸಮೀಪ ನಡೆದಿದೆ. ಚಾಲಕ ಸೇರಿದಂತೆ ನಾಲ್ವರಿಗೆ ಘಟನೆಯಿಂದ ಗಾಯಗಳಾಗಿವೆ. ಅಪಘಾತದಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕಾರು ಚಾಲಕ, ಬೈಲಹೊಂಗಲ್ ತಾಲೂಕಿನ ನವೀನ್ ಸಿದ್ದನಗೌಡನ ಮೇಲೆ ಘಟನೆಗೆ ಸಂಬoಧಿಸಿದoತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮೇಘನಾ ಟಿ.ಎಸ್, ಅಭಿಷೇಕ್ ಎನ್., ಸೌರವ್ ಎಚ್.ಗೆ ಗಾಯವಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

WhatsApp
Facebook
Telegram
error: Content is protected !!
Scroll to Top