ಭಟ್ಕಳ ತಾಲೂಕಿನ ನಾಮಧಾರಿ ಸಮಾಜದ ಗುರು ಮಠ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸಾಮೂಹಿಕ ಸತ್ಯ ನಾರಾಯಣ ವೃತ ಹಾಗು ಮಹಾ ಅನ್ನ ಸಂತರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ನಾಮಧಾರಿ ಸಮಾಜದ ಅಧ್ಯಕ್ಷ ಕ್ರಷ್ಣ ನಾಯ್ಕ ಆಸರಕೇರಿ ಮಾತನಾಡಿ,ಇಂದು ನಾವು ಸಾಮೂಹಿಕ ಸತ್ಯ ನಾರಾಯಣ ವೃತವನ್ನು ಹಮ್ಮಿಕೊಂಡಿದ್ದೆವೆ. ಇದರ ಪ್ರಯುಕ್ತ ಬಂದಂತ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಿದ್ದೆವೆ, ಕಾರ್ಯಕ್ರಮಕ್ಕೆ ಅಸಂಖ್ಯ ಭಕ್ತಾಧಿಗಳು ಭಾಗವಹಿಸಿ ದೇವರ ಕ್ರಪೇಗೆ ಪಾತ್ರರಾಗಿದ್ದಾರೆ.ಇನ್ನು ಮುಂದೆಯು ಕೂಡ ಇಂತ ದಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವವರಿದ್ದೆವೆ ಎಂದು ಹೇಳಿದರು.
ಈ ಸಂದರ್ಬದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರು, ಪಧಾದಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.