ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ..!

ರಾಜ್ಯ: ಮದುವೆಗೆ ಪೋಷಕರು (Parents) ವಿರೋಧ ವ್ಯಕ್ತಪಡಿಸಿದ್ದರಿಂದ ಬೇಸರಗೊಂಡ ಜೋಡಿ (Couple) ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಆನೇಕಲ್ (Anekal) ಸಂಮದೂರು ಬಳಿಯಲ್ಲಿ ರೈಲಿಗೆ ತಲೆಕೊಟ್ಟ ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಜೋಡಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದ ನಂತರ ಬೆಳಕಿಗೆ ಬಂದಿದೆ. ಮಣಿ ಮತ್ತು ಅನುಷಾ ಆತ್ಮಹತ್ಯೆಗೆ ಶರಣಾದ ಜೋಡಿ. ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗಲು ಸಹ ನಿರ್ಧರಿಸಿದ್ದರು. ಆದ್ರೆ ಇಬ್ಬರ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು ಎಂದು ವರದಿಯಾಗಿದೆ.

ಪೋಷಕರು ಮದುವೆಗೆ ಒಪ್ಪದ ಹಿನ್ನೆಲೆ ಮಣಿ ಮತ್ತು ಅನುಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು ಆಗಿದೆ

WhatsApp
Facebook
Telegram
error: Content is protected !!
Scroll to Top