ಹೊನ್ನಾವಾರ;ಬೈಕ್, ಕಾರು ನಡುವೆ ಅಪಘಾತ: ಬೈಕ್ ಸವಾರರಿಬ್ಬರು ಶರಾವತಿ ನದಿಗೆ ಬಿದ್ದು ಘಟನೆ..!

ಹೊನ್ನಾವರ: ಸೇತುವೆಯ ಮೇಲೆ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ನೀರಿನಲ್ಲಿ ಬಿದ್ದ ಘಟನೆ ಹೊನ್ನಾವರದ ಸೇತುವೆ ಮೇಲೆ ನಡೆದಿದೆ.
ದುರ್ಘಟನೆಯಲ್ಲಿ ಓರ್ವ ಈಜಿಕೊಂಡು ದಡ ಸೇರಿದ್ದು, ಇನ್ನೊರ್ವ ನಾಪತ್ತೆಯಾಗಿದ್ದಾನೆ. ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಚಲಿಸುತ್ತಿದ್ದ ಕಾರು ಹೊನ್ನಾವರ ಕಡೆಯಿಂದ ಕಾಸರಕೋಡ ಕಡೆಗೆ ಚಲಿಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.


ಪರಿಣಾಮ ಬೈಕ್ ಸವಾರರಿಬ್ಬರು ಶರಾವತಿ ನದಿಗೆ ಬಿದ್ದು ಓರ್ವ ನಾಪತ್ತೆಯಾಗಿದ್ದು, ಇನ್ನೊರ್ವ ಈಜಿಕೋಂಡು ದಡ ಸೇರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೈಕ್ ಸವಾರರು ಕಾಸರಕೋಡ ನಿವಾಸಿಗಳು ಎನ್ನುವ ಮಾಹಿತಿ ತಿಳಿದುಬಂದಿದ್ದು,‌ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ನದಿಯಲ್ಲಿ ಬಿದ್ದ ಓರ್ವ ವ್ಯಕ್ತಿಯ ಹುಡುಕಾಟ ಮುಂದುವರಿದಿದೆ. ಹೊನ್ನಾವರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp
Facebook
Telegram
error: Content is protected !!
Scroll to Top