ಬೆಂಗಳೂರು: ಪತ್ನಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಮದ್ಯದ ಅಮಲಿನಲ್ಲಿದ್ದ 36 ವರ್ಷದ ವ್ಯಕ್ತಿಯೋರ್ವ ಮಕ್ಕಳ ಎದುರೇ ಪತ್ನಿಯ ಕತ್ತು ಕೊಯ್ದು ಹತ್ಯೆಗೈದು, ನಂತರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಸೋಮವಾರ ಮುಂಜಾನೆ ಅತ್ತಿಬೆಲೆಯಲ್ಲಿ  ನಡೆದಿದೆ.

ಬೆಂಗಳೂರು: ಮದ್ಯದ ಅಮಲಿನಲ್ಲಿದ್ದ 36 ವರ್ಷದ ವ್ಯಕ್ತಿಯೋರ್ವ ಮಕ್ಕಳ ಎದುರೇ ಪತ್ನಿಯ ಕತ್ತು ಕೊಯ್ದು ಹತ್ಯೆಗೈದು, ನಂತರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಸೋಮವಾರ ಮುಂಜಾನೆ ಅತ್ತಿಬೆಲೆಯಲ್ಲಿ  ನಡೆದಿದೆ.

ಆರೋಪಿ ಸಂಪತ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾದ ಮಹಿಳೆಯನ್ನು ಲಾವಣ್ಯ (30) ಎಂದು ಗುರ್ತಿಸಲಾಗಿದೆ.

ಸಂಪತ್ ಕುಮಾರ್ ಅಬ್ಬನಪಾಳ್ಯದ ನಿವಾಸಿಯಾಗಿದ್ದು, ಜಿಗಣಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದದ.

ಮದ್ಯದ ಅಮಲಿನಲ್ಲಿದ್ದ ಸಂಪತ್ ಕುಮಾರ್ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಪತ್ನಿಯೊಂದಿಗೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ವೇಳೆ ಅಡುಗೆ ಮನೆಯಲ್ಲಿದ್ದ ಚಾಕು ತಂದು ಪತ್ನಿಯ ಕುತ್ತಿಗೆ ಸೀಳಿಸಿದ್ದಾನೆ. ಬಳಿಕ ಅದೇ ಚೂರಿಯಿಂದ ತನ್ನ ಕತ್ತನ್ನೂ ಕೊಯ್ದುಕೊಂಡಿದ್ದಾನೆ.

ಘಟನೆ ವೇಳೆ ಲಾವಣ್ಯ ಅವರನ್ನು ರಕ್ಷಣೆ ಮಾಡಲು ಬಂದಿದ್ದ ಅವರ ಪುತ್ರನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪತ್ನಿಯ ಕತ್ತು ಕೊಯ್ದು, ತಾನೂ ಕತ್ತು ಕೊಯ್ದುಕೊಂಡ ಸಂಪತ್ ನಂತರ ಮನೆಯಿಂದ ಓಡಿಹೋಗಲು ಯತ್ನಿಸಿದ್ದಾನೆ. ಈ ವೇಳೆ ಮನೆ ಬಾಗಿಲಿನಲ್ಲೇ ಕುಸಿದು ಬಿದ್ದಿದ್ದಾನೆ. ಘಟನೆ ಬಳಿಕ ನೆರೆಮನೆಯವರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಸಂಪತ್ ಕುಮಾರ್ ಆಗಾಗೆ ಜಗಳವಾಡುತ್ತಿದ್ದ. ಇದರಿಂದ ಬೇಸತ್ತಿದ್ದ ಲಾವಣ್ಯ ಪತಿಯಿಂದ ದೂರಾಗಲು ನಿರ್ಧರಿಸಿದ್ದರು. ಆದರೆ, ಕುಟುಂಬಸ್ಥರು ಮಾತುಕತೆ ನಡೆಸಿ ದೂರಾಗದಂತೆ ಮಾಡಿದ್ದರು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ.

WhatsApp
Facebook
Telegram
error: Content is protected !!
Scroll to Top