ಭಟ್ಕಳ : ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯು ಇಲ್ಲಿನ ಬಂದರ ರಸ್ತೆಯಲ್ಲಿರುವ ಸಿದ್ದಾರ್ಥ ಪ.ಪೂ.ಕಾಲೇಜಿನಲ್ಲಿ 5/4/2022 ಗುರುವಾರ ಮುಂಜಾನೆ 11ಗಂಟೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಸಾಹಿತಿ ಡಾ.ಆರ್.ವಿ ಸರಾಫ್ ಉದ್ಘಾಟಿಸಲಿದ್ದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ನಾರಾಯಣ ಯಾಜಿ, ಪ್ರಾಂಶುಪಾಲೆ ಅರ್ಚನಾ ಯು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಸಾಹಿತಿ, ಶಿಕ್ಷಕಿ ಪೂರ್ಣಿಮಾ ಕರ್ಕಿಕರ್ ಕನ್ನಡ ಮನಸ್ಸುಗಳ ಮೇಲೆ ಸಾಹಿತ್ಯ ಪರಿಷತ್ತು ಬೀರಿದ ಪ್ರಭಾವ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಪರಿಷತ್ತಿನ ಆಜೀವ ಸದಸ್ಯರು ಹಾಗೂ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ