ಭಟ್ಕಳದ ಬೆಳಕೆಯಲ್ಲಿ ಕಾರು ಸೇತುವೆಗೆ ಡಿಕ್ಕಿ- ಕಾರು ಚಾಲಕ ಸ್ಥಳದಲ್ಲೇ ಸಾವು

ಭಟ್ಕಳ -ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇವರ ಪುತ್ರಿ ಅನು ಮರಿಯಾ (16) ಗಾಯಗೊಂಡಿದ್ದು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಜೋಸೆಫ್ ಮಗಳ ನೀಟ್ ಪರೀಕ್ಷೆಗೋಸ್ಕರ ಮಂಗಳೂರಿಗೆ ಹೋಗಿ ವಾಪಾಸಾಗುತ್ತಿದ್ದಾಗ ಭಾರೀ ಮಳೆಯಿಂದ ಬೆಳಕೆ ಸೇತುವೆಯ ಹತ್ತಿರ ದನವೊಂದು ಅಡ್ಡಬಂದ ಪರಿಣಾಮ ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಕಾರಿನ ಚಾಲಕನ ಎಡಗೆನ್ನೆಗೆ ತೀವ್ರವಾಗಿ ಪೆಟ್ಟು ತಗುಲಿದ್ದು ತಕ್ಷಣ ಗಾಯಾಳುಗಳನ್ನು ಸರಕಾರಿ ಆಸ್ಪತ್ರೆಗೆ ತರಲಾಯಿತಾದರೂ ಆಸ್ಪತ್ರೆಗೆ ಬರುವ ಮೊದಲೇ ಜೋಸೆಫ್ ನಿದನರಾಗಿದ್ದಾರೆನ್ನಲಾಗಿದೆ.

ಸುದ್ದಿ ತಿಳಿದ ತಕ್ಷಣ ನೂರಾರು ಜನರು ಆಸ್ಪತ್ರೆಯ ಆವರಣಕ್ಕೆ ಆಗಮಿಸಿದ್ದು ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರು ವಿದ್ಯುತ್ ವೈರಿಂಗ್ ಗುತ್ತಿಗೆದಾರರ ಕೆಲಸ ಮಾಡಿಕೊಂಡಿದ್ದು ಕಳೆದ ಹಲವಾರು ವರ್ಷಗಳಿಂದ ಭಟ್ಕಳದ ಜನರ ಪ್ರೀತಿ ಗಳಿಸಿದ್ದಲ್ಲದೇ ಎಲ್ಲರಲ್ಲಿಯೂ ಉತ್ತಮ ಬಾಂಧವ್ಯ ಹೊಂದಿ ಜನಾನುರಾಗಿಗಳಾಗಿದ್ದರು. ನೂರಾರು ಜನರು ಆಗಮಿಸಿ ಅಂತಿಮ ದರ್ಶನ ಪಡೆದರು. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಬ್ ಇನ್ಸಪೆಕ್ಟರ್ ಭರತ್‌ಕುಮಾರ್ ವಿ. ತನಿಖೆ ನಡೆಸಿದ್ದಾರೆ.

WhatsApp
Facebook
Telegram
error: Content is protected !!
Scroll to Top