ಸಿದ್ದಾಪುರ:- ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಚರಿಸುವ ಎಲ್ಲಾ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಪಟ್ಟಣ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ತೀರ್ಮಾನಿಸಲಾಯಿತು
ನೆಹರೂ ಮೈದಾನದಲ್ಲಿ ಪಟಾಕಿ ಅಂಗಡಿಗಳಿಗೆ ಅನುಮತಿಯನ್ನು ನೀಡಲಾಗಿದೆ ಪಟಾಕಿಯಿಂದಾದ ಕಸಗಳನ್ನು ಪಟ್ಟಣ ಪಂಚಾಯಿತಿ ವಾಹನಕ್ಕೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಅಧಿಕಾರಿಗಳು ತಿಳಿಸಿದರು
ಉಳಿದಂತೆ ಸಭೆಯಲ್ಲಿ ಕುಡಿಯುವ ನೀರು, ಮನೆ ಕರವಸೂಲಿ, ಕಾಮಗಾರಿಗಳ ಪ್ರಗತಿ, ಅಂಗಡಿ ಕರ ವಸೂಲಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು
ಸಭೆಯಲ್ಲಿ ಉಪಾಧ್ಯಕ್ಷ ರವಿ ಕುಮಾರ್ ನಾಯ್ಕ್ ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ್ ಹೊನ್ನೆಗುಂಡಿ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು