ಸಿದ್ದಾಪುರ ಗಿಳಸೆಯಲ್ಲಿ ಬಿಳಗಿ ವಲಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ

ಸಿದ್ದಾಪುರ:- ಬಿಳಗಿ ವಲಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ ತಾಲೂಕಿನ ವಾಜಗೋಡ ಪಂಚಾಯತ್ ವ್ಯಾಪ್ತಿಯ ಗಿಳಸೆ ಕ್ರೀಡಾಂಗಣದಲ್ಲಿ ನಡೆಯಿತು.
ಸಿ ಆರ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ಪಠ್ಯ ಚಟುವಟಿಕೆಯ ಜೊತೆಗೆ ಪಠೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಓದಿನ ಜೊತೆ ಆಟದಲ್ಲಿ ಭಾಗವಹಿಸಿಬೇಕು ಎಂದ ಅವರು ಆ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಾಲೂಕಿನ ಕಿರ್ತಿ ಬೆಳಗಿಸಿರಿ ಎಂದು ಹಾರೈಸಿದರು.
ಲಂಬಾಪುರ್ ಪ್ರೌಢ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್ ಗೌಡರ್ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಕೂಟ ಕ್ಕೆ ಚಾಲನೆ ನೀಡಿದರು.
ಕ್ರೀಡಾ ಧ್ವಜಾರೋಹಣ ಮಾಡಿ ಕ್ರೀಡಾಪಟು ಗಳಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು
ವಾಜಗೋಡ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಸಭೆಯಲ್ಲಿ ಉಪಾಧ್ಯಕ್ಷೆ ಮಂಗಲ ಗೌಡ, ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ನಾಯ್ಕ್ ಐಸೂರ್, ಸುರೇಶ್ ನಾಯ್ಕ್, ಎಸ್. ಏನ್ ಭಟ್, ಪ್ರಮುಖರಾದ ಎಂ ಏನ್ ಹೆಗಡೆ, ಏನ್ ಜಿ ಹೆಗಡೆ, ಕೃಷ್ಣ ಸುತ್ತಲಮನೆ, ದೈಹಿಕ ಪರಿವಿಕ್ಷಕ ರಾಜು ನಾಯ್ಕ್, ಪತ್ರಕರ್ತ ದಿವಾಕರ್ ಸಂಪಖಂಡ ಉಪಸ್ಥಿತರಿದ್ದರು.
ಈ ವೇಳೆಯಲ್ಲಿ ಲಂಬಾಪುರ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ 9 ವರ್ಷ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶಿಕ್ಷಕ ವಿನಾಯಕ ವೈದ್ಯ ರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿ ಆದಿತ್ಯ ಹೆಗಡೆ ಪ್ರಾರ್ಥಿಸಿದರು. ಪಲ್ಲವಿ ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಶಿಕ್ಷಕ ಉದಯ ನಾಯ್ಕ್ ಸ್ವಾಗತಿಸಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣಪತಿ ಹೆಗಡೆ ನಿರೂಪಿಸಿದರು. ಶಿಕ್ಷಕ ಗುರುರಾಜ್ ವಂದಿಸಿದರು.

WhatsApp
Facebook
Telegram
error: Content is protected !!
Scroll to Top