ಸಿದ್ದಾಪುರ :- ಸರಾಯಿ ಕುಡಿದ ಅಮಲಿನಲ್ಲಿ ತನ್ನ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಾಕಿ ತಾನು ಸಹ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟ ಘಟನೆ ತಾಲೂಕಿನ ಕಾನಗೋಡ ಗ್ರಾಮದ ಗಣೇಶ ನಗರದಲ್ಲಿ ನಡೆದಿದೆ.
ಖಾಸಗಿ ವಾಹನ ಚಾಲಕನಾದ ಗುತ್ಯ ಸಣ್ಣಹುಡುಗ ಚೆನ್ನಯ್ಯ (56) ಇತನು ಶುಕ್ರವಾರ ಮಧ್ಯಾಹ್ನ ವಿಪರೀತ ಸರಾಯಿ ಕುಡಿದು ಮನೆಗೆ ಬಂದು ಮನೆಯಲ್ಲಿದ್ದ ತನ್ನ ಹೆಂಡತಿಯೊಂದಿಗೆ ಜಗಳ ಮಾಡಿ ಕುಡಿದ ಅಮಲಿನಲ್ಲಿ ತನ್ನ ಪತ್ನಿಯಾದ ರೇಣುಕಾ ಗುತ್ಯಾ ಚನ್ನಯ್ಯ (45) ಇವಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ಇದರಿಂದ ಅವಳ ಎದೆಯ ಎಡ ಭಾಗ ಕೈಕಾಲು ಸುಟ್ಟು ತೀವ್ರತರದ ಗಾಯವಾಗಿದ್ದು ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತ್ನಿಯನ್ನು ಸರ್ಕಾರಿ ಆಸ್ಪತ್ರೆಗೆ ಒಯ್ಯುತ್ತಿದ್ದಂತೆ ಗುತ್ಯ ಸಣ್ಣಹುಡುಗ ಚೆನ್ನಯ್ಯನು ಸಹ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದಾನೆ. ಸ್ಥಳೀಯರು ಖಾಸಗಿ ವಾಹನದ ಮೂಲಕ ಈತನನ್ನು ಸಹ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗ ದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗುವುದು ಎಂದು ತಿಳಿದು ಬಂದಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಸರಾಯಿ ಕುಡಿದ ಅಮಲಿನಲ್ಲಿ ತನ್ನ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಾಕಿ ದೂರ್ತ
WhatsApp
Facebook
Telegram