ಸಿದ್ದಾಪುರ:- ಎಲ್ಲರೂ ಅವರ ಸ್ವಹಿತಾಸಕ್ತಿಯಿಂದ ಆಸ್ತಿ ಅಂತಸ್ತು ಮಾಡಿಕೊಳ್ಳುತ್ತಾ ಇದ್ದಾರೆ. ಜನಪರವಾಗಿ ಯಾವ ಪಕ್ಷವೂ ಕೆಲಸ ಮಾಡುತ್ತಿಲ್ಲ. ಆಮ್ ಆದ್ಮಿ ಪಕ್ಷ ಮಾತ್ರ ಜನರ ಪರವಾಗಿ ಕೆಲಸ ಮಾಡುವ ಪಕ್ಷವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಾಲಕೃಷ್ಣ ನಾಯ್ಕ ಹೇಳಿದರು.
ಅವರು ಪಟ್ಟಣದ ಪಕ್ಷದ ಕಚೇರಿಯ ಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ
ಈಗಾಗಲೇ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದ್ದೇವೆ. ಪ್ರತಿಯೊಂದು ಕ್ಷೇತ್ರದಲ್ಲಿ ಎರಡು ಮೂರು ಜನ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಗಳಾಗಿದ್ದಾರೆ.
ಯಾರು ಪಕ್ಷದ ಬೇರು ಮಟ್ಟದ ಕಾರ್ಯಕರ್ತರಾಗಿ ಬೇರು ಮಟ್ಟದಿಂದ ಸಂಘಟನೆ ಮಾಡಿಕೊಂಡು ಇಡೀ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ಪಡೆಯನ್ನು ಕಟ್ಟಿ ಚುನಾವಣೆ ಅಖಾಡಕ್ಕೆ ಯಾರು ತಯಾರಾಗುತ್ತಾರೋ ಅವರಿಗೆ ನಾವು ಪಕ್ಷದಿಂದ ಟಿಕೆಟ್ ಕೊಡುವ ವಿಚಾರವನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿರವರು ಸೂಚನೆಯನ್ನು ನೀಡಿದ್ದಾರೆ ಎಂದರು.