ಭಟ್ಕಳ: ಪ್ರವಾಸಕ್ಕೆ ಬಂದಿದ್ದ ಚಿತ್ರದುರ್ಗದ ವಿದ್ಯಾರ್ಥಿ ಸಮುದ್ರ ಪಾಲು

ಭಟ್ಕಳ:ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಮುದ್ರದ ಅಲೆಗೆ ಸಿಲುಕಿ ಸಮುದ್ರ ಪಾಲಾದ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ಮಹಮ್ಮದ್ ಫಾಝಿಲ್ (16) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದು ಚಿತ್ರದುರ್ಗದಿಂದ ಮರುಡೇಶ್ವರಕ್ಕೆ ಶಾಲಾ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ತಂಡ ಗೆಳೆಯರ ಜೊತೆ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದಾನೆ.

ಸುಮಾರು ಒಂದು ಗಂಟೆಗಳ ಕಾಲ ಹುಡುಕಾಟದ ಬಳಿಕ

ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಲೈಫ್ ಗಾರ್ಡ್‌ಗಳ ನಿರ್ಲಕ್ಷ್ಯದಿಂದಲೇ ಬಾಲಕನ ಸಾವಾಗಿದೆ ಎಂದು ಸ್ಥಳೀಯರ ಆರೋಪ ಮಾಡಿದ್ದು ಜನರಿಗೆ ಸೂಚನೆ ನೀಡುವ, ರಕ್ಷಣೆ ಮಾಡುವ ಬದಲು ಬೋಟಿಂಗ್‌ನಲ್ಲಿ ಲೈಫ್ ಗಾರ್ಡಗಳು ನಿರತರಾಗಿದ್ದರು ಹೀಗಾಗಿ ದುರಂತ ಸಂಭವಿಸಿದೆ ಎಂದು ದೂರಿದ್ದಾರೆ.

WhatsApp
Facebook
Telegram
error: Content is protected !!
Scroll to Top